22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

ಉಜಿರೆ: ಸಂವಿಧಾನ ಶಿಲ್ಪಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ನಾವು ಅಳವಡಿಸಿಕೊಂಡಾಗ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ ಎಂದು ಬೆಳ್ತಂಗಡಿ ಉಪ ವಿಭಾಗದ ಪೋಲಿಸ್ ಉಪ ಅಧೀಕ್ಷಕಿ ರೋಹಿಣಿ ಸಿ‌‌.ಕೆ ಹೇಳಿದರು. ಅವರು ಉಜಿರೆ ಗ್ರಾಮದ ಗಾಂಧಿನಗರದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆಯನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಭಾರತೀಯರು ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಅಂಬೇಡ್ಕರ್ ರವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಬದಲಾಗಿ ವಿಶ್ವಮಾನವರಾಗಿದ್ದಾರೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ತಿಳಿದುಕೊಂಡು ಬದುಕಬೇಕು ಎಂದು ಕರೆ ನೀಡಿದರು.

ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಮಾತನಾಡಿ ಜಗತ್ತಿನೆಲ್ಲೆಡೆ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಏಕೈಕ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್ ಮಾತ್ರ. ಅಂತಹ ಮಹಾನ್ ಚೇತನವನ್ನು ನಾವು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸುವ ಬದಲಾಗಿ ದಿನನಿತ್ಯ ಅವರನ್ನು ಅನುಸರಿಸುವ ಅಗತ್ಯವಿದೆ ಎಂದ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಘೋಷಣೆಯನ್ನು ಕೇವಲ ಘೋಷಣೆಯಾಗಿ ನೋಡದೆ ಅದನ್ನು ಅಳವಡಿಸಿಕೊಳ್ಳುವ ತುರ್ತು ಅಗತ್ಯವಿದೆ. ಸಂವಿಧಾನದ ಪೀಠಿಕೆಯಲ್ಲಿರುವಂತೆ ಸರ್ವಧರ್ಮ ಸಮನ್ವಯತೆಯನ್ನು ಸಾಧಿಸುವ ಮೂಲಕ ಸಾಮರಸ್ಯದ ಸಮಾಜದ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕಾಗಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ ಮಾತನಾಡುತ್ತಾ ಅಂಬೇಡ್ಕರ್ ಅವರ ದಲಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಅಪಾರ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯುವ ಉದ್ಯಮಿ ಇರ್ಫಾನ್ ಗಾಂಧಿನಗರ, ಖಲೀಫಾ ಜುಮ್ಮಾ ಮಸೀದಿ ಗಾಂಧಿನಗರ ಉರು ಅಧ್ಯಕ್ಷರಾದ ಅಕ್ಬರ್ ಮತ್ತು ಊರಿನ ಎಲ್ಲಾ ಹಿರಿಯ ನಾಗರಿಕರು ಉಪಸ್ಥಿತರಿದ್ದರು ವಿನಯ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆ ವತಿಯಿಂದ ಮುಂಡೂರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya
error: Content is protected !!