26.9 C
ಪುತ್ತೂರು, ಬೆಳ್ತಂಗಡಿ
April 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು.

ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಬಲಿಪ ರೆಸಾರ್ಟ್‌ ಮಾಲಕರು ಬೆಳ್ತಂಗಡಿ ತಾಲೂಕಿನ ಲಯನ್ಸ್ ಕ್ಲಬ್ ಅಧ್ಯಕ್ಷ ರಾದ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್ ದಂಪತಿಗಳಿಂದ ದೀಪ ಬೆಳಗಿಸುವ ಮೂಲಕ ಚಾಲನೆಗೊಂಡಿತು.

ವೇದಿಕೆಯಲ್ಲಿ ಇತ್ತೀಚಿಗೆ ರಾಷ್ಟ್ರ ಪ್ರಶಸ್ತಿ ಪಡೆದ ದ.ಕ ಜಿಲ್ಲಾ ಎಕೆಎಮ್ಎಸ್ಎಸ್ ಗೌರವಾಧ್ಯಕ್ಷರು ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ದಂಪತಿಗಳನ್ನು ಮತ್ತು ಲಯನ್ ಮುರಳ ಬಲಿಪ ದಂಪತಿಗಳನ್ನು ಸನ್ಮಾನಿಸಲಾಯಿತು.

‌ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಮ್.ಕೆ ಮಣಿ ಕಾರ್ಯದರ್ಶಿ ಸುರೇಶ್ ಗೌಡ ಅಧ್ಯಕ್ಷ ತಂಗಚ್ಚನ್ ದಂಪತಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಕುಟುಂಬದ ಸದಸ್ಯರು ಭಾಗವಹಿಸಿದರು. ಮಹಿಳೆಯರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆದವು. ಮಧ್ಯಾಹ್ನದ ಭೋಜನದ ನಂತರ ಮಕ್ಕಳು ಈಜು ಕೊಳದಲ್ಲಿ ಈಜಾಡಿ ಪೂರ್ಣ ಪ್ರಮಾಣದ ರಜೆಯ ಮಜಾ ಅನುಭವಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ವಿಕ್ರಂ ಗೌಡ ನಿರೂಪಿಸಿ, ಸುರೇಶ್ ಗೌಡ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!