September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

ಪುತ್ತೂರು : ಕಲಾವಿದರ ಮನೆಮಂದಿಗೆ ಅಸಭ್ಯ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ದೂರು ದಾಖಲಾಗಿದೆ.

ಕಲಾವಿದರ ಮನೆಯವರಿಗೆ ಫೋನ್ ಮೂಲಕ ಕರೆ ಮಾಡಿ ಕೀಳು ಮಟ್ಟದ ಶಬ್ದಗಳಿಂದ ಮಹಿಳೆಯ ಗೌರವಕ್ಕೆ ಧಕ್ಕೆ ತಂದು ಬೆದರಿಕೆ ಹಾಕಿ ತೇಜೋವಧೆ ಮಾಡಿದ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಲಾವಿದನ ತಾಯಿ ದೂರು ನೀಡಿದ್ದಾರೆ.

ಸದ್ಯ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಾವಿದ ದಿನೇಶ್ ಕೊಡಪದವು ತಾಯಿ ಬಂಟ್ವಾಳದ ಲೀಲಾವತಿ(71) ನೀಡಿದ ದೂರಿನ ಮೇರೆಗೆ ಏ.13 ರಂದು ಕಲಂ 196(1),352,351(2),79 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya
error: Content is protected !!