24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಕಛೇರಿ ಹೊಂದಿರುವ ಇಂಡೇನ್ ಗ್ಯಾಸ್ ವಿತರಣ ಸಂಸ್ಥೆಯಾದ ಮಂಜು ಇಂಡೇನ್ ಗ್ಯಾಸ್ ಸಂಸ್ಥೆಯು ನಮಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ನೀಡದೇ ಸತಾಯಿಸುತ್ತಿದ್ದು, ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡು ನ್ಯಾಯ ಒದಗಿಸುವಂತೆ ಗುರುವಾಯನಕೆರೆ ನಿವಾಸಿಗಳಾದ ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಹಾಗೂ ಮಹಮ್ಮದ್ ರಫೀಕ್ ಬೆಳ್ತಂಗಡಿ ಪೊಲೀಸ್ ಠಾಣೆ ಹಾಗೂ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದಾರೆ.

ಅವರ ವಿತರಣ ವ್ಯವಸ್ಥೆಯಂತೆ ತಿಂಗಳು ಕಳೆದ ಬಳಿಕ ಗ್ಯಾಸ್ ಬುಕ್ ಮಾಡಿದರೂ ಸಿಲಿಂಡರ್ ನೀಡುತ್ತಿಲ್ಲ. ಬಡವರಾದ ನಮಗೆ ಅಡುಗೆಗೆ ಪರ್ಯಾಯ ವ್ಯವಸ್ಥೆ ಇಲ್ಲ. ಮನೆಮನೆಗೆ ತಲುಪಿಸುವ ವ್ಯವಸ್ಥೆ ಇದ್ದರೂ ಅವರು ಮಾಡುತ್ತಿಲ್ಲ. ಬದಲಾಗಿ ನಾವೇ ಅವರ ಕಛೇರಿಗೆ ಹೋಗಿ ಗ್ಯಾಸ್ ಬುಕ್ ಮಾಡಿ ರಶೀದಿ ಮಾಡಿದ ಬಳಿಕ ೧೦-೨೦ ದಿನಗಳ ಬಳಿಕ ಅವರ ಗೋದಾಮಿಗೆ ಹೋಗಿ ಸಿಲಿಂಡರ್ ಪಡೆಯಬೇಕಾಗಿದೆ. ಬೆಳ್ತಂಗಡಿಯಿAದ ಮದ್ದಡ್ಕ- ಪಡಂಗಡಿ ಕಡೆ ವಾಸವಿರುವ ನಾವು ಇದರಿಂದ ಗ್ಯಾಸ್ ಸಿಲಿಂಡರ್ ಪಡೆಯಲು ಬಹುದೂರ ಹೋಗಬೇಕಾಗಿದೆ. ಒಂದೊಮ್ಮೆ ಅಲ್ಲಿಗೆ ಹೋದರೂ ಮತ್ತೊಂದು ದಿನ ಬನ್ನಿ ಎಂದು ಸಾಗ ಹಾಕುತ್ತಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೇ, ಹೆಚ್ಚುವರಿ ಸಿಲಿಂಡರ್ ಪಡೆಯಲು ಅರ್ಜಿ ನೀಡಿದರೂ ಸಿಲಿಂಡರ್ ನೀಡದೇ ಸತಾಯಿಸುತ್ತಾರೆ. ಹೆಚ್ಚುವರಿ ಹಣ ಕಟ್ಟಿದರಷ್ಟೇ ಸಿಲಿಂಡರ್ ಪಡೆಯಬಹುದಾಗಿದೆ. ಹೆಸರು ಬದಲಾವಣೆಗೂ ಹೆಚ್ಚುವರಿ ಹಣ ತೆರಬೇಕಾಗಿದೆ. ಇಂತಹ ಅವ್ಯವಸ್ಥೆಗಳಿಂದ ಸಾರ್ವಜನಿಕರು ರೋಸಿ ಹೋಗಿದ್ದೇವೆ.

ಆದುದರಿಂದ ನಮಗೆ ಮನೆ ಬಳಕೆಯ ಸಮರ್ಪಕವಾದ ಗ್ಯಾಸ್ ಸಿಲಿಂಡರ್ ವಿತರಣೆಗೆ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

Related posts

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya
error: Content is protected !!