26.9 C
ಪುತ್ತೂರು, ಬೆಳ್ತಂಗಡಿ
April 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡ ರುಚಿ ತೋರಿಸಿದ ಘಟನೆ ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.4ರಂದು ಸ್ವಚ್ಛತಾ ಶನಿವಾರ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯ ಸಾರ್ವಜನಿಕರ ರಸ್ತೆಯ ಬದಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡುವಾಗ ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಎಂಬುವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುರುವುದು ತ್ಯಾಜ್ಯ ವಸ್ತುಗಳಲ್ಲಿ ಸಿಕ್ಕಿರುವ ದಾಖಲೆಗಳಿಂದ ಕಂಡು ಬಂದಿರುತ್ತದೆ. ತಾವು ಓರ್ವ ಜವಾಬ್ದಾರಿಯುವ ಗ್ರಾಮಸ್ಥರಾಗಿ ಅಲ್ಲದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ನೀವು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿಯಯನ್ನು ವಹಿಸಬೇಕಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಮನೆಯಲ್ಲಿನ ಹಳೆಯ ತ್ಯಾಜ್ಯಗಳನ್ನು ಎಸಗಿದ ಕಾರಣ ನಿಡ್ಲೆ ಗ್ರಾಮ ಪಂಚಾಯತ್ 1,035ರೂ.ನಂತೆ ದಂಡ ವಿಧಿಸಿ ಪಂಚಾಯತ್ ನೋಟಿಸ್ ರವಾನೆಗೊಳಿಸಿದೆ.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!