22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡ ರುಚಿ ತೋರಿಸಿದ ಘಟನೆ ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.4ರಂದು ಸ್ವಚ್ಛತಾ ಶನಿವಾರ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯ ಸಾರ್ವಜನಿಕರ ರಸ್ತೆಯ ಬದಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡುವಾಗ ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಎಂಬುವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುರುವುದು ತ್ಯಾಜ್ಯ ವಸ್ತುಗಳಲ್ಲಿ ಸಿಕ್ಕಿರುವ ದಾಖಲೆಗಳಿಂದ ಕಂಡು ಬಂದಿರುತ್ತದೆ. ತಾವು ಓರ್ವ ಜವಾಬ್ದಾರಿಯುವ ಗ್ರಾಮಸ್ಥರಾಗಿ ಅಲ್ಲದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ನೀವು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿಯಯನ್ನು ವಹಿಸಬೇಕಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಮನೆಯಲ್ಲಿನ ಹಳೆಯ ತ್ಯಾಜ್ಯಗಳನ್ನು ಎಸಗಿದ ಕಾರಣ ನಿಡ್ಲೆ ಗ್ರಾಮ ಪಂಚಾಯತ್ 1,035ರೂ.ನಂತೆ ದಂಡ ವಿಧಿಸಿ ಪಂಚಾಯತ್ ನೋಟಿಸ್ ರವಾನೆಗೊಳಿಸಿದೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya
error: Content is protected !!