September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

ಉಜಿರೆ: ಸಂವಿಧಾನ ಶಿಲ್ಪಿ ಡಾ‌.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ನಾವು ಅಳವಡಿಸಿಕೊಂಡಾಗ ನಮ್ಮ ಜೀವನ ಪರಿಪೂರ್ಣಗೊಳ್ಳುತ್ತದೆ ಎಂದು ಬೆಳ್ತಂಗಡಿ ಉಪ ವಿಭಾಗದ ಪೋಲಿಸ್ ಉಪ ಅಧೀಕ್ಷಕಿ ರೋಹಿಣಿ ಸಿ‌‌.ಕೆ ಹೇಳಿದರು. ಅವರು ಉಜಿರೆ ಗ್ರಾಮದ ಗಾಂಧಿನಗರದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆಯನ್ನು ದೀಪ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಭಾರತೀಯರು ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಅಂಬೇಡ್ಕರ್ ರವರು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ, ಬದಲಾಗಿ ವಿಶ್ವಮಾನವರಾಗಿದ್ದಾರೆ. ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ತಿಳಿದುಕೊಂಡು ಬದುಕಬೇಕು ಎಂದು ಕರೆ ನೀಡಿದರು.

ಮುಖ್ಯ ಅಥಿತಿಯಾಗಿ ಭಾಗವಹಿಸಿದ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಮಾತನಾಡಿ ಜಗತ್ತಿನೆಲ್ಲೆಡೆ ಜನ್ಮದಿನಾಚರಣೆ ಆಚರಿಸಿಕೊಳ್ಳುವ ಏಕೈಕ ವ್ಯಕ್ತಿ ಡಾ.ಬಿ.ಆರ್ ಅಂಬೇಡ್ಕರ್ ಮಾತ್ರ. ಅಂತಹ ಮಹಾನ್ ಚೇತನವನ್ನು ನಾವು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸುವ ಬದಲಾಗಿ ದಿನನಿತ್ಯ ಅವರನ್ನು ಅನುಸರಿಸುವ ಅಗತ್ಯವಿದೆ ಎಂದ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಘೋಷಣೆಯನ್ನು ಕೇವಲ ಘೋಷಣೆಯಾಗಿ ನೋಡದೆ ಅದನ್ನು ಅಳವಡಿಸಿಕೊಳ್ಳುವ ತುರ್ತು ಅಗತ್ಯವಿದೆ. ಸಂವಿಧಾನದ ಪೀಠಿಕೆಯಲ್ಲಿರುವಂತೆ ಸರ್ವಧರ್ಮ ಸಮನ್ವಯತೆಯನ್ನು ಸಾಧಿಸುವ ಮೂಲಕ ಸಾಮರಸ್ಯದ ಸಮಾಜದ ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕಾಗಿದೆ ಎಂದರು.

ಸಭೆಯನ್ನು ಉದ್ದೇಶಿಸಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೆ ಮಾತನಾಡುತ್ತಾ ಅಂಬೇಡ್ಕರ್ ಅವರ ದಲಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಅಪಾರ ಕೊಡುಗೆಯನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯುವ ಉದ್ಯಮಿ ಇರ್ಫಾನ್ ಗಾಂಧಿನಗರ, ಖಲೀಫಾ ಜುಮ್ಮಾ ಮಸೀದಿ ಗಾಂಧಿನಗರ ಉರು ಅಧ್ಯಕ್ಷರಾದ ಅಕ್ಬರ್ ಮತ್ತು ಊರಿನ ಎಲ್ಲಾ ಹಿರಿಯ ನಾಗರಿಕರು ಉಪಸ್ಥಿತರಿದ್ದರು ವಿನಯ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!