September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು.

ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಬಲಿಪ ರೆಸಾರ್ಟ್‌ ಮಾಲಕರು ಬೆಳ್ತಂಗಡಿ ತಾಲೂಕಿನ ಲಯನ್ಸ್ ಕ್ಲಬ್ ಅಧ್ಯಕ್ಷ ರಾದ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್ ದಂಪತಿಗಳಿಂದ ದೀಪ ಬೆಳಗಿಸುವ ಮೂಲಕ ಚಾಲನೆಗೊಂಡಿತು.

ವೇದಿಕೆಯಲ್ಲಿ ಇತ್ತೀಚಿಗೆ ರಾಷ್ಟ್ರ ಪ್ರಶಸ್ತಿ ಪಡೆದ ದ.ಕ ಜಿಲ್ಲಾ ಎಕೆಎಮ್ಎಸ್ಎಸ್ ಗೌರವಾಧ್ಯಕ್ಷರು ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ದಂಪತಿಗಳನ್ನು ಮತ್ತು ಲಯನ್ ಮುರಳ ಬಲಿಪ ದಂಪತಿಗಳನ್ನು ಸನ್ಮಾನಿಸಲಾಯಿತು.

‌ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಮ್.ಕೆ ಮಣಿ ಕಾರ್ಯದರ್ಶಿ ಸುರೇಶ್ ಗೌಡ ಅಧ್ಯಕ್ಷ ತಂಗಚ್ಚನ್ ದಂಪತಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಕುಟುಂಬದ ಸದಸ್ಯರು ಭಾಗವಹಿಸಿದರು. ಮಹಿಳೆಯರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆದವು. ಮಧ್ಯಾಹ್ನದ ಭೋಜನದ ನಂತರ ಮಕ್ಕಳು ಈಜು ಕೊಳದಲ್ಲಿ ಈಜಾಡಿ ಪೂರ್ಣ ಪ್ರಮಾಣದ ರಜೆಯ ಮಜಾ ಅನುಭವಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ವಿಕ್ರಂ ಗೌಡ ನಿರೂಪಿಸಿ, ಸುರೇಶ್ ಗೌಡ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya
error: Content is protected !!