23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು.

ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಬಲಿಪ ರೆಸಾರ್ಟ್‌ ಮಾಲಕರು ಬೆಳ್ತಂಗಡಿ ತಾಲೂಕಿನ ಲಯನ್ಸ್ ಕ್ಲಬ್ ಅಧ್ಯಕ್ಷ ರಾದ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್ ದಂಪತಿಗಳಿಂದ ದೀಪ ಬೆಳಗಿಸುವ ಮೂಲಕ ಚಾಲನೆಗೊಂಡಿತು.

ವೇದಿಕೆಯಲ್ಲಿ ಇತ್ತೀಚಿಗೆ ರಾಷ್ಟ್ರ ಪ್ರಶಸ್ತಿ ಪಡೆದ ದ.ಕ ಜಿಲ್ಲಾ ಎಕೆಎಮ್ಎಸ್ಎಸ್ ಗೌರವಾಧ್ಯಕ್ಷರು ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ದಂಪತಿಗಳನ್ನು ಮತ್ತು ಲಯನ್ ಮುರಳ ಬಲಿಪ ದಂಪತಿಗಳನ್ನು ಸನ್ಮಾನಿಸಲಾಯಿತು.

‌ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಮ್.ಕೆ ಮಣಿ ಕಾರ್ಯದರ್ಶಿ ಸುರೇಶ್ ಗೌಡ ಅಧ್ಯಕ್ಷ ತಂಗಚ್ಚನ್ ದಂಪತಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಕುಟುಂಬದ ಸದಸ್ಯರು ಭಾಗವಹಿಸಿದರು. ಮಹಿಳೆಯರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆದವು. ಮಧ್ಯಾಹ್ನದ ಭೋಜನದ ನಂತರ ಮಕ್ಕಳು ಈಜು ಕೊಳದಲ್ಲಿ ಈಜಾಡಿ ಪೂರ್ಣ ಪ್ರಮಾಣದ ರಜೆಯ ಮಜಾ ಅನುಭವಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ವಿಕ್ರಂ ಗೌಡ ನಿರೂಪಿಸಿ, ಸುರೇಶ್ ಗೌಡ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya
error: Content is protected !!