22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಎಕೆಎಮ್ಎಸ್ಎಸ್ (ರಿ) ದ.ಕ ಜಿಲ್ಲಾ ಬೆಳ್ತಂಗಡಿ ‌ಘಟಕದ ಪ್ರಥಮ ವರ್ಷದ ಕುಟುಂಬ ಮಿಲನ ಕಾರ್ಯಕ್ರಮ ಏ.14ರಂದು ಬಲಿಪ ರೆಸಾರ್ಟ್ ನಲ್ಲಿ ನಡೆಯಿತು.

ಎಕೆಎಮ್ಎಸ್ಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಪಿ ತಂಗಚ್ಚನ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವು ಬಲಿಪ ರೆಸಾರ್ಟ್‌ ಮಾಲಕರು ಬೆಳ್ತಂಗಡಿ ತಾಲೂಕಿನ ಲಯನ್ಸ್ ಕ್ಲಬ್ ಅಧ್ಯಕ್ಷ ರಾದ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್ ದಂಪತಿಗಳಿಂದ ದೀಪ ಬೆಳಗಿಸುವ ಮೂಲಕ ಚಾಲನೆಗೊಂಡಿತು.

ವೇದಿಕೆಯಲ್ಲಿ ಇತ್ತೀಚಿಗೆ ರಾಷ್ಟ್ರ ಪ್ರಶಸ್ತಿ ಪಡೆದ ದ.ಕ ಜಿಲ್ಲಾ ಎಕೆಎಮ್ಎಸ್ಎಸ್ ಗೌರವಾಧ್ಯಕ್ಷರು ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ದಂಪತಿಗಳನ್ನು ಮತ್ತು ಲಯನ್ ಮುರಳ ಬಲಿಪ ದಂಪತಿಗಳನ್ನು ಸನ್ಮಾನಿಸಲಾಯಿತು.

‌ತಾಲೂಕು ಘಟಕದ ಗೌರವಾಧ್ಯಕ್ಷರಾದ ಎಮ್.ಕೆ ಮಣಿ ಕಾರ್ಯದರ್ಶಿ ಸುರೇಶ್ ಗೌಡ ಅಧ್ಯಕ್ಷ ತಂಗಚ್ಚನ್ ದಂಪತಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಕುಟುಂಬದ ಸದಸ್ಯರು ಭಾಗವಹಿಸಿದರು. ಮಹಿಳೆಯರಿಗೆ, ಮಕ್ಕಳಿಗೆ ಆಟೋಟ ಸ್ಪರ್ಧೆಗಳು ನಡೆದವು. ಮಧ್ಯಾಹ್ನದ ಭೋಜನದ ನಂತರ ಮಕ್ಕಳು ಈಜು ಕೊಳದಲ್ಲಿ ಈಜಾಡಿ ಪೂರ್ಣ ಪ್ರಮಾಣದ ರಜೆಯ ಮಜಾ ಅನುಭವಿಸುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.ವಿಕ್ರಂ ಗೌಡ ನಿರೂಪಿಸಿ, ಸುರೇಶ್ ಗೌಡ ಸ್ವಾಗತಿಸಿ, ಹರೀಶ್ ಶೆಟ್ಟಿ ವಂದಿಸಿದರು.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗಬ್ರಹ್ಮಮಂಡಲ ಸೇವೆ ಕಾರ್ಯಕ್ರಮ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!