22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

ಬೆಳ್ತಂಗಡಿ: ಗೇರುಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇಲ್ಲಿ ಕಳೆದ 13 ವರ್ಷಗಳಿಂದ ಸಮಾಜ ವಿಜ್ಞಾನ ವಿಷಯದ ಶಿಕ್ಷಕರಾಗಿ ಸಾರ್ಥಕ ಸೇವೆ ಸಲ್ಲಿಸಿ ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆ, ಸವಣಾಲು ಇಲ್ಲಿಗೆ ವರ್ಗಾವಣೆಗೊಂಡ ಮಮತಾ ಅವರಿಗೆ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ. ಮಾತನಾಡಿ “ಒಂದೇ ಸಂಸ್ಥೆಯಲ್ಲಿ 13 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ ಹಾಗೂ ಸಂಸ್ಥೆಯ ಶ್ರೇಯೋಭಿವೃದ್ಧಿಯಲ್ಲಿ ತೊಡಗಿಸಿಕೊಂಡ ಮಮತಾ ಅವರಿಗೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಮಮತಾ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಅತ್ಯಂತ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಮತಾ ಅವರು “ಈ ಸಂಸ್ಥೆಯಲ್ಲಿ ಕಳೆದ 13 ವರ್ಷಗಳು ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳು ಸಹೋದ್ಯೋಗಿಗಳ ಸಹಕಾರ ಮತ್ತು ಇಲ್ಲಿನ ಪರಿಸರ ನನ್ನ ವೃತ್ತಿ ಜೀವನಕ್ಕೆ ಹೆಚ್ಚಿನ ಶಕ್ತಿ ನೀಡಿದೆ” ಎಂದು ನುಡಿದರು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಕಾರ್ಯಧ್ಯಕ್ಷ ಗೋಪಾಲ ಗೌಡ ಹಾಗೂ ಇತರ ಸದಸ್ಯರು, ಶಿಕ್ಷಕ ವೃಂದದವರು, ಶಾಲಾ ಸಿಬ್ಬಂದಿ ಉಪಸ್ಥಿತರಿದ್ದು ಮಮತಾ ಅವರಿಗೆ ಶುಭ ಹಾರೈಸಿದರು. ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿ ರಮ್ಯಾ ಅಭಿನಂದಿಸಿದರು.

Related posts

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!