ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಚಂದ್ರಶೇಖರ ಗೌಡ ಧರ್ಮದಕಲ ಶಿಶಿಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರು ರವರಿಗೆ ಎಸ್ ಪಿ ಆಯಿಲ್ ಮಿಲ್ ನ ಬ್ಯಾಂಕಿನ ವಠಾರದಲ್ಲಿ ನುಡಿನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ನಿರ್ದೇಶಕರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಸುಂದರ ಗೌಡ ಪುಡ್ಕೆತ್ತು, ಧರ್ಮರಾಜ ಗೌಡ ಅಡ್ಕಡಿ, ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಸಮಾಜದ ಪ್ರಮುಖರಾದ ವಿಜಯ ಗೌಡ ಕಲ್ಲಳಿಕೆ, ದೇವಿಪ್ರಸಾದ್ ಗೌಡ ಬೊಲ್ಮ, ಹರೀಶ್ ಗೌಡ ಮರಕಡ ನುಡಿನಮನ ಸಲ್ಲಿಸಿದರು.
ಸಮಾಜದ ಪ್ರಮುಖರೆಲ್ಲ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.












