July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

ನಾವೂರು: ಸೌರಮಾನ ಯುಗಾದಿ “ಪರಾಭವನಾಮ”ಸಂವತ್ಸರಾರಂಭ ಪ್ರಯುಕ್ತ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ, ಸೌರಮಾನ ಯುಗಾದಿ ವಿಶೇಷ ಪೂಜೆ ಹಾಗೂ ವಿದ್ಯಾರ್ಥಿಗಳಿಗೆ ರಾಮಾಯಣ ಪುಸ್ತಕ ವಿತರಣಾ ಕಾರ್ಯಕ್ರಮವು ಎ.15ರಂದು ನೂರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳ್ತಂಗಡಿ ಗುರುದೇವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಕೃಷ್ಣಪ್ಪ ಪೂಜಾರಿ ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಷು ಹಬ್ಬದ ಸಂದೇಶವನ್ನು ಹಾಗೂ ವಿಷು ಕಣಿಯ ಮಹತ್ವವನ್ನು ತಿಳಿಸಿಕೊಟ್ಟರು ಮತ್ತು ನಾವೂರಿನಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್, ನಾವೂರು ಇದರ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ನೆನಪಿಸಿ ಶುಭವನ್ನು ಕೋರಿ ಮುಂದಿನ ದಿನಗಳಲ್ಲಿ ಇನ್ನೂ ಉನ್ನತ ಮಟ್ಟದಲ್ಲಿ ಧರ್ಮ ಶಿಕ್ಷಣ ಕಾರ್ಯಗಳು ಈ ಕ್ಷೇತ್ರದ ಮೂಲಕ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಪೂರ್ವಾಧ್ಯಕ್ಷರಾದ ಎ ಬಿ ಉಮೇಶ್ ಅತ್ಯಡ್ಕ, ಟ್ರಸ್ಟಿಗಳಾದ ಗಣೇಶ್ ಕಣಾಲು, ಗಣೇಶ್ ಗೌಡ , ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ಮೋಹನ್ ಬಂಗೇರ, ದೀನೇಶ್ ಗೌಡ ಮಲವಂತಿಗೆ, ಯತೀಶ್ ಕಣಾಲು, ಡಾ। ಕವಿತಾ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಪ್ರಧಾನ ಅರ್ಚಕರಾದ ದಿನೇಶ್ ಭಟ್ ವೈದಿಕ ವಿಧಿಗಳನ್ನು ನೆರವೇರಿಸಿಕೊಟ್ಟರು. ಡಾ। ಪ್ರದೀಪ್ ಆಟಿಕುಕ್ಕೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣವನ್ನು ನಡೆಸಿದರು. ಸಾಮೂಹಿಕ ಪಠಣದಲ್ಲಿ ಅಂರ್ಜಾಲದ ಮೂಲಕವೂ ಬಹಳಷ್ಟು ಭಕ್ತರು ಭಾಗವಹಿಸಿದರು.

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya
error: Content is protected !!