23.3 C
ಪುತ್ತೂರು, ಬೆಳ್ತಂಗಡಿ
June 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

ಬೆಳ್ತಂಗಡಿ: ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿದ್ದAತೆ ಮೂರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಏ.೧೫ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ ಕರೆತಂದು ವಿಚಾರಣೆ ನಡೆಸಿದರು.

ಬೆಳ್ತಂಗಡಿಯ ಕಸಬಾ ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಜೋರಮ್ ಬರ್ಬೋಝ ಎಂಬುವರು ೨೦೨೫ರ ಆಗಷ್ಟ್ ೭ ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್ ೨೦೨೩ ಸೆಕ್ಸನ್ ೨೯೬ರಂತೆ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಬಸವನಗುಡಿ ಕಚೇರಿಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ಬೆಳ್ತಂಗಡಿ ಠಾಣೆಗೆ ಹಾಜರು ಪಡಿಸಿದರು. ಸೋಕೋ ತಂಡ ಪರಿಶೀಲನೆ ನಡೆಸಿತು.

ಪ್ರಕರಣದ ವಿವರ: ದೂರುದಾರ ಜೋರಮ್ ಬರ್ಬೋಝ ಎಂಬುವವರು ೦೭-೦೮-೨೦೨೫ ರಂದು ಸಮಯ ೧೧.೦೦ ಗಂಟೆಗೆ ತಮ್ಮ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಟುಕ್‌ನಲ್ಲಿ ದೇಶಗಳನ್ನು ಪರಿಶೀಲಿಸುತ್ತಿರುವಾಗ ಪುನೀತ್ ಕರೆಹಳ್ಳಿ ಎಂಬಾತನು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‌ಲಿ, ‘ಧರ್ಮಸ್ಥಳದವರ ಮೇಲೆ ನೀನು ಕೈ ಎತ್ತಿನೋಡುವ, ಆಟೋ ರಿಕ್ಷಾದವಿಗೆ ಮುಟ್ಟಿಯಾ ನೀನು? ನೀನು ಅಪ್ಪನಿಗೆ ಹುಟ್ಟಿದ್ರೆ ಬೆರ್ಕೆಗೆ ಹುಟ್ಟಿದ್ರೆ ಬೇಡ..ಅಪ್ಪನಿಗೆ ಹುಟ್ಟಿದ್ರೆ ಮುಟ್ಟಿ ನೋಡೋಣ. ಆಮೇಲೆದ್ದು ಮುಂದಿನ ಚರಿತ್ರೆನ ನಾನು ಬರೀತಿನಿ, ಅಂಗಡಿಯನ್ನಿಗೆ ಧರ್ಮಸ್ಥಳದೊಳಕ್ಕೆ ನುಗ್ಗಿ ಹೊಡಿತನಂತೆ ರಿಕ್ಷಾದವಿಗೆ, ಏನ್ ಬಿಟ್ಟಿಬಿದ್ದಿದ್ದಿವಿ ಅಂಡ್ಕೊAಡಿದ್ಯಾ? ಎಲಿಯವರೆಗೆ ಕಟ್ಟಿದ ಬುರುಡೆ ಪುರಾಣಗಳೆಲ್ಲ ಮುಗೀತು, ಅಲ್ಲಿ ಏನು ಸಿಗ್ಲಿಲ್ಲ, ಈಗ ಹೊಸ ಕತೆ ಶುರು ಮಾಡಿದ್ರಾ. ನೀನು ನಿನ್ನ ಮುಟ್ಟಾಳ, ನಿನ್ನ ಕುಡುಕರ ಗ್ಯಾಂಗ್‌ನ್ನು ಕರ್ಕೊಂಡು ಬಾ ಅಪ್ಪನಿಗೆ ಹುಟ್ಟಿದ್ರೆ, ಬೆರ್ಕೆಗೆ ಹುಟ್ಟಿದ್ರೆ ಬೇಡ, ಅಪ್ಪನಿಗೆ ಹುಟ್ಟಿದ್ರೆ ಮುಟ್ಟಿ ನೋಡು, ನಾವು ತೋರಿಸ್ತೇವೆ ಏನು ಅಂತ “ಎಂಬುದಾಗಿ ಆಶ್ಲೀಲವಾಗಿ ಮಾತನಾಡಿರುವ ವೀಡಿಯೋದ ತುಣುಕನ್ನು ವಿದ್ಯುನ್ಮಾನ ಸಾಧನಗಳಾದ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿರುವುದಾಗಿದೆ.

Related posts

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!