September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!