July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಏಪ್ರಿಲ್ 15ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ಎ.15ರಂದು ಉದ್ಘಾಟನೆಗೊಂಡಿತು.

ಸಮಾರಂಭವನ್ನು ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ ಮಾತನಾಡಿ “ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಪೂರಕ. ಹಾಗಾಗಿ ಪಠ್ಯ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು, ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಸಮಾಜದ ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದು, ತನ್ನ ಸಾಧನೆಗೂ ಈ ಕಾಲೇಜಿನ ಒತ್ತಾಸೆ ಇದೆ ಎಂಬುದಾಗಿ ತನ್ನ ವಿದ್ಯಾರ್ಥಿ ಜೀವನವನ್ನು ಸ್ಮರಿಸಿದರು.

ಮುಖ್ಯ ಅತಿಥಿ ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ದೈಹಿಕ ನಿರ್ದೇಶಕ ಡಾ. ಕರುಣಾಕರ್ ಶೆಟ್ಟಿ ಮಾತನಾಡಿ “ಅನೇಕ ವರ್ಷಗಳಿಂದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸುತ್ತ ಈ ಸಂಸ್ಥೆಯು ಬ್ಯಾಡ್ಮಿಂಟನ್ ಆಟಗಾರರನ್ನು ಪ್ರೋತ್ಸಾಹಿಸಿ ಕ್ರೀಡಾಕ್ಷೇತ್ರದಲ್ಲಿ ಗುರುತಿಸುವಂತೆ ಮಾಡಿದೆ. ಪ್ರತಿಭೆಗೆ ಪೂರಕವಾಗಿ ಬೆಳೆಸುವ ಗುಣ ಈ ಸಂಸ್ಥೆಗೆ ಇದೆ”ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ಕಾರ್ಯಕ್ರಮ ಆಯೋಜಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.

ಮುಖ್ಯ ಅತಿಥಿಗಳಾದ ಪ್ರೊಫೆಸರ್ ರಾಜನ್ ವಿ ಎನ್, ಫಾ |ಲ್ಯಾರಿ ಪಿಂಟೋ, ಫಾ| ದೀಪಕ್ ಡೇಸಾ, ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ, ಶ್ರೀ ಸೂರಜ್ ಚಾರ್ಲ್ಸ್ ನ್ಯೂನಸ್,ಶ್ರೀ ನೆಲ್ಸನ್ ಲೆಸ್ರಾದೋ, ಶ್ರೀ ವಿಲ್ಸನ್ ರೂಪೇಶ್ ಮೊರಾಸ್ ಉಪಸ್ಥಿತರಿದ್ದು ಶುಭ ಹಾರೈಸಿದರು

ಸೇಕ್ರೆಡ್ ಹಾರ್ಟ್ ಕಾಲೇಜ್ ನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಕಾಶ್ ಡಿಸೋಜ ಸ್ವಾಗತಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ಈಶ್ವರ್ ಗೌಡ ಧನ್ಯವಾದವಿತ್ತರು. ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ ನೆಲ್ಸನ್ ಮೋನಿಸ್ ಕಾರ್ಯಕ್ರಮ ನಿರ್ವಹಿಸಿದರು.

Related posts

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya
error: Content is protected !!