25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡ ರುಚಿ ತೋರಿಸಿದ ಘಟನೆ ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.4ರಂದು ಸ್ವಚ್ಛತಾ ಶನಿವಾರ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯ ಸಾರ್ವಜನಿಕರ ರಸ್ತೆಯ ಬದಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡುವಾಗ ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಎಂಬುವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುರುವುದು ತ್ಯಾಜ್ಯ ವಸ್ತುಗಳಲ್ಲಿ ಸಿಕ್ಕಿರುವ ದಾಖಲೆಗಳಿಂದ ಕಂಡು ಬಂದಿರುತ್ತದೆ. ತಾವು ಓರ್ವ ಜವಾಬ್ದಾರಿಯುವ ಗ್ರಾಮಸ್ಥರಾಗಿ ಅಲ್ಲದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ನೀವು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿಯಯನ್ನು ವಹಿಸಬೇಕಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಮನೆಯಲ್ಲಿನ ಹಳೆಯ ತ್ಯಾಜ್ಯಗಳನ್ನು ಎಸಗಿದ ಕಾರಣ ನಿಡ್ಲೆ ಗ್ರಾಮ ಪಂಚಾಯತ್ 1,035ರೂ.ನಂತೆ ದಂಡ ವಿಧಿಸಿ ಪಂಚಾಯತ್ ನೋಟಿಸ್ ರವಾನೆಗೊಳಿಸಿದೆ.

Related posts

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
error: Content is protected !!