July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡ ರುಚಿ ತೋರಿಸಿದ ಘಟನೆ ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.

ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.4ರಂದು ಸ್ವಚ್ಛತಾ ಶನಿವಾರ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯ ಸಾರ್ವಜನಿಕರ ರಸ್ತೆಯ ಬದಿ ಸ್ವಚ್ಚತಾ ಕಾರ್ಯಕ್ರಮವನ್ನು ಮಾಡುವಾಗ ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಎಂಬುವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುರುವುದು ತ್ಯಾಜ್ಯ ವಸ್ತುಗಳಲ್ಲಿ ಸಿಕ್ಕಿರುವ ದಾಖಲೆಗಳಿಂದ ಕಂಡು ಬಂದಿರುತ್ತದೆ. ತಾವು ಓರ್ವ ಜವಾಬ್ದಾರಿಯುವ ಗ್ರಾಮಸ್ಥರಾಗಿ ಅಲ್ಲದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ನೀವು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿಯಯನ್ನು ವಹಿಸಬೇಕಾಗಿತ್ತು. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಮನೆಯಲ್ಲಿನ ಹಳೆಯ ತ್ಯಾಜ್ಯಗಳನ್ನು ಎಸಗಿದ ಕಾರಣ ನಿಡ್ಲೆ ಗ್ರಾಮ ಪಂಚಾಯತ್ 1,035ರೂ.ನಂತೆ ದಂಡ ವಿಧಿಸಿ ಪಂಚಾಯತ್ ನೋಟಿಸ್ ರವಾನೆಗೊಳಿಸಿದೆ.

Related posts

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya
error: Content is protected !!