22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ ಮತ್ತು ಬುಲ್-ಬುಲ್ ಘಟಕಗಳ 2025-26ನೇ ಸಾಲಿನ ವಾರ್ಷಿಕ ಶಿಬಿರಕ್ಕೆ ಎ.15ರಂದು ಚಾಲನೆ ನೀಡಲಾಯಿತು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿ ಮಾತನಾಡಿ ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಇಂತಹ ಶಿಬಿರಗಳಿಗೆ ಸದಾ ಪ್ರೋತ್ಸಾಹ ನೀಡಲಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಜೊತೆ ಕಾರ್ಯದರ್ಶಿ ಕೆ. ಎಂ ಶ್ರೀನಾಥ್, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ, ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಉಪಸ್ಥಿತರಿದ್ದರು.

ಶಾಲಾ ಸಹಶಿಕ್ಷಕಿ ಗೈಡ್ ಕ್ಯಾಪ್ಟನ್ ಸುಮಲತಾ. ಎ ಸ್ವಾಗತಿಸಿ, ವಂದಿಸಿದರು. ಗೈಡ್ ವಿದ್ಯಾರ್ಥಿನಿ ಅಂಜನಾ. ಕೆ ಮತ್ತು ಸ್ಕೌಟ್ ವಿದ್ಯಾರ್ಥಿ ನಿಶಾನ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya
error: Content is protected !!