23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

ಉಜಿರೆ: ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ ಎ.10 ರಂದು ಜರಗಿತು.

ಎಸ್.ಡಿ. ಎಮ್. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವ ಅದರಿಂದ ಆಗುವ ಪ್ರಯೋಜನ ಮತ್ತು ಅದನ್ನು ಸಂಪೂರ್ಣವಾಗಿ ನಿಮ್ಮ ಜೀವನದಲ್ಲಿ ತೊಡಗಿಸಿಕೊಳ್ಳಿ ಇದರಿಂದ ನಿಮ್ಮ ಜೀವನಕ್ಕೂ ಮತ್ತು ನಿಮ್ಮ ಆರೋಗ್ಯಕ್ಕೂ ಉತ್ತಮ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಮೇಶ್ ಎಚ್., ಎಸ್ ಡಿ ಎಮ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಶಾರದ, ಎಸ್ ಡಿ ಎಮ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸಂದೇಶ ಪೂoಜ, ಸುದಿನ, ದೈಹಿಕ ಶಿಕ್ಷಣ ನಿರ್ದೇಶಕರು ಎಸ್ಡಿಎಂ ಪದವಿ ಕಾಲೇಜು. ಸುಭಾಷ್, ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತರಬೇತು ನೀಡಿದ ಎಸ್ ಡಿ ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಧ ಮ ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕಿ ತ್ರಿವೇಣಿ ಇವರು ಸಭೆಯ ಅಧ್ಯಕ್ಷತೆಯ ನುಡಿಯೊಂದಿಗೆ ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಇವರು ಸ್ವಾಗತಿಸಿದರು. ವಿದ್ಯಾರ್ಥಿಯಾದ ಆತ್ಮೀ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!