ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ವತಿಯಿಂದ ಶೀಘ್ರದಲ್ಲೇ ಹೊಸದಾಗಿ “ಸಹನಾ ಶ್ರೀ ಫೌಂಡೇಶನ್” ಪ್ರಾರಂಭವಾಗಲಿದೆ ಎಂದು ಸಹನಾ ಶ್ರೀ ಫೌಂಡೇಶನ್ ಇದರ ಅಧ್ಯಕ್ಷರಾದ ರಾಜೇಶ್ ಪುದುಶೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಫೌಂಡೇಶನ್ ಮೂಲಕ ಸಮಾಜ ಸೇವೆ, ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಹಬ್ಬ-ಹರಿದಿನಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಲಾಗುವುದು.ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಾಜಸೇವೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.
ಈ ಮಹತ್ವದ ಕಾರ್ಯದಲ್ಲಿ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ನೀಡುವಂತೆ ಈ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












