ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

ಬೆಳ್ತಂಗಡಿ: ಕಳೆದ 35 ವರ್ಷಗಳಿಂದ ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,ಬದ್ದತೆಯಿಂದ ತಂತ್ರಿಗಳಾಗಿ ಧಾರ್ಮಿಕ ವಿಧಿವತ್ತಾಗಿ ಕೆಲಸ ಮಾಡಿದ ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ,ಕರಂಬಾರು ಕಾಜಿಮುಗೇರು ಕೆಳ್ಕರವಾಡಿ ಸೀತರಾಮ ಹೆಬ್ಬಾರ್ (78ವ ) ಅವರು ವಯೋಸಹಜ ಅನಾರೋಗ್ಯದಿಂದ ಎ 16ರಂದು ವಿಧಿವಶರಾದರು.

ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಬರಾಯ ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅನುವಂಶೀಕ ತಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಗತಿಪರ ಕೃಷಿಕರಾಗಿ,ಧಾರ್ಮಿಕ ಕ್ಷೇತ್ರದ ಮುಂದಾಳುವಾಗಿ,ಸಮಾಜವನ್ನು ಗಟ್ಟಿಗೊಳಿಸುವಲ್ಲಿ ಶ್ರಮ ವಹಿಸಿದ್ದರು.‌

ವಿಶೇಷವಾಗಿ ಶ್ರದ್ದಾ ಕೇಂದ್ರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಮೃತರು ಪತ್ನಿ,ಎರಡು ಪುತ್ರರು,ಒರ್ವೆ ಪುತ್ರಿ ಹಾಗೂ ಅಪಾರ ಪ್ರಮಾಣದ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!