22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!