ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
error: Content is protected !!