23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya
error: Content is protected !!