22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ 2026-2031ರ ಅವಧಿಗೆ ಎಲ್ಲಾ 8 ಸ್ಥಾನಗಳಿಗೂ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕು ಘಟಕದ 8 ಸ್ಥಾನಗಳಿಗೆ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಏ.14ರಂದು 8 ಮಂದಿ ತಮ್ಮ ನಾಮಪತ್ರ ಹಿಂಪಡೆದುಕೊಂಡ ಪರಿಣಾಮ 8 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಮುಗುಳಿ ನೇತಾಜಿ ಸುಭಾಷ್ ಚಂದ್ರ ಬೋಸ್ ವಸತಿ ಶಾಲೆಯ ಲಕ್ಷ್ಮೀಕಾಂತ್ ಬೇಕಲ್ ಎಸ್, ಬದನಾಜೆ ಸ.ಹಿ.ಪ್ರಾ.ಶಾಲೆಯ ನಿರಂಜನ್, ಪೆರಿಂಜೆ ಸ.ಹಿ.ಪಾ.ಶಾಲೆಯ ರಾಜೇಶ್ ಎನ್, ಕಿಲ್ಲೂರು ಸ.ಹಿ.ಪ್ರಾ, ಶಾಲೆಯ ರಮೇಶ್ ಎಂ, ಉಜಿರೆ ಹಳೆಪೇಟೆ ಸ.ಹಿ.ಪ್ರಾ. ಶಾಲೆಯ ಸುರೇಶ್, ಮಹಿಳಾ ಮೀಸಲು ಸ್ಥಾನದಿಂದ ನಿಟ್ಟಡೆ ಸ.ಹಿ.ಪ್ರಾ.ಶಾಲೆಯ ಆರತಿ ಕುಮಾರಿ, ಉಣ್ಣಾಲು ಸ.ಕಿ.ಪ್ರಾ. ಶಾಲೆಯ ಗಂಗಾರಾಣಿ ನಾ.ಜೋಶಿ ಮತ್ತು ಸುಳ್ಳೋಡಿ ಸ.ಕಿ.ಪ್ರಾ.ಶಾಲೆಯ ಸೌಮ್ಯ ಎಂ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಡಗಕಾರಂದೂರು ಸ.ಹಿ.ಪ್ರಾ.ಶಾಲೆಯ ಮಂಗಳ ಕೆ, ಬೆಳ್ತಂಗಡಿ ಪಿಎಂಶ್ರೀ ಶಾಲೆಯ ಮಹಮ್ಮದ್ ಶರೀಫ್ ಕೆ.ಪಿ, ಕುದ್ರಡ್ಕ ಸ.ಕಿ.ಪ್ರಾ. ಶಾಲೆಯ ಚೇತನ್ ಕುಮಾರ್, ಪುಂಜಾಲಕಟ್ಟೆ ಕೆ.ಪಿ.ಎಸ್. ಶಾಲೆಯ ಅನಿತಾ, ಬೆಳ್ತಂಗಡಿ ಪಿಎಂಶ್ರೀ ಶಾಲೆಯ ಸೀತಾರಾಮ, ಕಳೆಂಜ ಸ.ಹಿ.ಪ್ರಾ.ಶಾಲೆಯ ಕೃಷ್ಣಪ್ಪ ಟಿ, ಬಸನ ಗೌಡ ಎಸ್ ಮತ್ತು ಕಾರಿಂಜ ಸ.ಕಿ.ಪ್ರಾ.ಶಾಲೆಯ ಪರಮೇಶ್ವರ ಎಸ್. ಅವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ನಿವೃತ್ತ ಪ್ರಥಮ ದರ್ಜೆ ಸಹಾಯಕ ನಾರಾಯಣ ನಾಯ್ಕ ಮುಖ್ಯ ಚುನಾವಣಾಧಿಕಾರಿಯಾಗಿ ಹಾಗೂ ನಿವೃತ್ತ ದೈಹಿಕ ಶಿಕ್ಷಕ ಪಂಚಾಕ್ಷರಪ್ಪ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!