July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಪ್ರಕೃತಿ ರಮಣೀಯ ಸುಂದರ ಪರಿಸರದಲ್ಲಿ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ- ಚಂದ್ರ ಜೋಡುಕರೆ ಕೊಲ್ಲಿ ಕಂಬಳ

Suddi Udaya
error: Content is protected !!