26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya
error: Content is protected !!