September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

ಮರೋಡಿ: ಶ್ರೀ ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ. 28 ರಿಂದ ಮೇ 1ರವರೆಗೆ ನಡೆಯಲಿದ್ದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಗೌರವಾಧ್ಯಕ್ಷರಾದ ಬೆಳ್ಳಿಬೀಡು ಹೇಮರಾಜ್ ಕೆ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಗೌರವಿಸಿ, ಸನ್ಮಾನಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಸಮಿತಿಯ ಸಹನಾ ಜೈನ್, ಎಕ್ಸೆಲ್ ಕಾಲೇಜಿನ ನಿಶಾ,ಶ್ರುತಿ,ರಿತೇಶ್ ಕುಮಾರ್ ಹಾಗೂ ಇತರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಪೊಸರಡ್ಕ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷರಾದ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!