22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂದಾರು: ಗ್ರಾಮ ಪಂಚಾಯತ್ ಬಂದಾರು, ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ನೇತೃತ್ವದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ರಸ್ತೆಯ ಬದಿ ಸ್ವಚ್ಛತಾ ಕಾರ್ಯಕ್ರಮ ಸುಣ್ಣಾನ ಅಂಗನವಾಡಿ ಕೇಂದ್ರ ವಠಾರದಲ್ಲಿ ಎ.14 ರಂದು ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ತಮ್ಮಯ್ಯ ಗೌಡ ನಾವುಳೆ, ಶಿವಪ್ಪ ಗೌಡ ನಾವುಳೆ, ಉಮರಬ್ಬ, ಇಸುಬು, ಎಂ ಪಿ ಅಶ್ರಫ್, ಮೊಹಮ್ಮದ್, ಅಂಡೆಕೇರಿ, ದಿನೇಶ್ ಗೌಡ ದಾಸರಕೋಡಿ, ಶೀನಪ್ಪ ಗೌಡ ಸುಣ್ಣಾನ, ತುಕಾರಾಮ ಕೊಂಬೇಡಿ, ಚಂದ್ರಶೇಖರ ಪಾಂಜಾಳ, ಮನೋಜ್ ನಾವುಳೆ, ಗಣೇಶ್ ಕೇದಗೆದಕೊಡಿ, ಮೀನಾಕ್ಷಿ , ಶುಶೀಲ ಬಚ್ಚಿರಪಳಿಕೆ, ನಳಿನಿ ನಾವುಳೆ, ವಿಶ್ವನಾಥ ಸುಣ್ಣಾನ, ಗುರುಕಿರಣ್ ಸುಣ್ಣಾನ,ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬಂದಾರು ಗ್ರಾಮದ ನಿರುoಬುಡ – ಸುಣ್ಣಾನ- ಅಂಡೆಕೇರಿ – ನಾವುಳೆ-ಖಂಡಿಗ ರಸ್ತೆಯ ಇಕ್ಕೆಲದಲ್ಲಿರುವ ಹುಲ್ಲು, ಗಿಡ, ಕಸ ಕಡ್ಡಿಗಳನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

Related posts

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya
error: Content is protected !!