24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
error: Content is protected !!