25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

bಬೆಳ್ತಂಗಡಿ: ಮಳೆಗಾಲದಲ್ಲಿ ಸಂಭವಿಸುವ ವಿಪತ್ತುಗಳಿಂದ ವಿದ್ಯುತ್ ಕಡಿತದ ಸಮಸ್ಯೆ ಕಡಿಮೆ ಮಾಡಲು ಲೈನ್‌ ಮ್ಯಾನ್‌ಗಳ ಜೊತೆ ಸಿಬ್ಬಂದಿ ನೇಮಿಸಲಾಗಿದ್ದು, ಆಯಾ ವಿಭಾಗಕ್ಕೆ ಎಇಇ ಉಸ್ತುವಾರಿಯಲ್ಲಿ ಐವರ ತಂಡ ಕಾರ್ಯಾಚರಿಸಲಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾ‌ರ್ ಹೇಳಿದರು.

ಬಿಜೈಯ ಮೆಸ್ಕಾಂ ಕಚೇರಿಯಲ್ಲಿ ಎ.15ರಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಈ ತಂಡವನ್ನು ಈಗಾಗಲೇ ರಚಿಸಲಾಗಿದ್ದು, ಅವರಿಗೆ ಒಂದು ವಾಹನವನ್ನೂ ಒದಗಿಸಲಾಗಿದೆ. ಸೆಪ್ಟೆಂಬರ್‌ವರೆಗೆ ಅವರ ಕಾರ್ಯಾಚರಣೆ ನಡೆಯುತ್ತಿರುತ್ತವೆ. ಟ್ರಾನ್ಸ್ ಫಾರ್ಮರ್ ದುರಸ್ತಿ, ಮರ, ಗೆಲ್ಲುಗಳು ಬಿದ್ದು ತಂತಿ, ಕಂಬಗಳಿಗೆ ಹಾನಿಯಾದರೆ ತುರ್ತಾಗಿ ಸರಿಪಡಿಸುವುದು ತಂಡದ ಕೆಲಸವಾಗಿರುತ್ತದೆ. 63 ಸಬ್ ಡಿವಿಷನ್‌ ನ 245 ವಿಭಾಗಗಳಲ್ಲಿ ತಂಡ ರಚನೆಯಾಗಿದೆ. ತಿಂಗಳಿಗೆ 2 ಕೋಟಿ ರೂ. ಹೆಚ್ಚುವರಿ ಖರ್ಚು ಬರಲಿದೆ. ಆದರೆ ಜನರಿಗೆ ಸೇವೆ ಸಿಗಲಿದೆ ಎಂದರು.

ಲೈನ್‌ಮ್ಯಾನ್‌ಗಳ ನೇಮಕ: ಮೆಸ್ಕಾಂಗೆ ನೂತನವಾಗಿ 465 ಮಂದಿ ಲೈನ್ ಮನ್‌ಗಳ ನೇಮಕ ಮಾಡಲಾಗುತ್ತಿದೆ. 9,248 ಲೈನ್‌ಮ್ಯಾನ್‌ ಹುದ್ದೆಗಳ ಪೈಕಿ 5,283 ಹುದ್ದೆ ಭರ್ತಿಯಾಗಿದೆ. ಉಳಿದ 4145 ಮಂದಿಯನ್ನು ಇನ್ನು ನೇಮಕ ಮಾಡಬೇಕಿದೆ. ಪ್ರತಿ ತಾಲೂಕು ಕೇಂದ್ರಗಳಲ್ಲೂ ಇ-ಚಾರ್ಜಿಂಗ್ ಸೆಂಟರ್ ಅಳವಡಿಸುವ ಬಗ್ಗೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಶೀಘ್ರವಾಗಿ ಕೆಲಸ ನಡೆಸಲಾಗುವುದು ಎಂದು ಹರೀಶ್ ಕುಮಾರ್ ಹೇಳಿದರು.

Related posts

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya
error: Content is protected !!