23.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು ಎ.16ರಂದು ಆಯೋಜಿಸಿತು.

ಈ ಭೇಟಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಕಾರ್ಯವಿಧಾನ, ಕಾನೂನು ಪ್ರಕ್ರಿಯೆ ಹಾಗೂ ನ್ಯಾಯನಿರ್ವಹಣೆಯ ಬಗ್ಗೆ ನೇರ ಅನುಭವ ನೀಡುವುದು. ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನ್ಯಾಯಾಧೀಶರ ನ್ಯಾಯನಿರ್ವಹಣೆ, ವಕೀಲರ ವಾದ-ಪ್ರತಿವಾದ, ಪ್ರಕರಣಗಳ ವಿಚಾರಣೆ ಮುಂತಾದ ಪ್ರಕ್ರಿಯೆಗಳನ್ನು ಗಮನಿಸಿದರು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ತಿಳುವಳಿಕೆ ದೊರೆಯಿತು.

ಈ ಶೈಕ್ಷಣಿಕ ಭೇಟಿ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ, ಸಾಮಾಜಿಕ ಜವಾಬ್ದಾರಿ ಹಾಗೂ ನ್ಯಾಯದ ಮಹತ್ವದ ಬಗ್ಗೆ ಅರಿವು ಮೂಡಿಸಿತು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಾಯಕವಾಗಿವೆ.
ಈ ಶೈಕ್ಷಣಿಕ ಅಧ್ಯಯನದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!