September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಏ.19ರ ಭಾನುವಾರದಂದು ಬೆಳಗ್ಗೆ 10:30ಕ್ಕೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. ಸಮಸ್ತ ಭಕ್ತರು ಹಾಗೂ ಹಿಂದೂ ಬಾಂಧವರು ಸಮಯಕ್ಕೆ ಮುಂಚಿತವಾಗಿ ಹಾಜರಾಗುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.

10:30ಕ್ಕೆ ದೇವರ ಸಾನಿಧ್ಯದಲ್ಲಿ ಭಕ್ತರ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಬಳಿಕ ಜಮಾ-ಖರ್ಚಿನ ವಿವರಗಳನ್ನು ಸಮಿತಿಯವರು ಮಂಡಿಸಲಿದ್ದು, ದೇವಸ್ಥಾನದ ಮುಂದಿನ ಕಾಮಗಾರಿಗಳ ಬಗ್ಗೆ ಮೇಸ್ತ್ರಿ ಮತ್ತು ಆಚಾರಿ ಇವರಿಂದ ಮಾಹಿತಿ ನೀಡಲಾಗುತ್ತದೆ. ಗ್ರಾಮದ ಎಲ್ಲಾ ಬೈಲುವಾರು ಸಮಿತಿಗಳ ಚರ್ಚೆ, ಪದಾಧಿಕಾರಿಗಳ ಆಯ್ಕೆ ಹಾಗೂ ಮೇ ತಿಂಗಳಲ್ಲಿ ಬೈಲುವಾರು ಸಭೆ ನಡೆಸುವ ಕುರಿತು. ಜೊತೆಗೆ ಒಂದು ದಿನದ ಶ್ರಮದಾನ ಕಾರ್ಯಕ್ರಮ, ವಂತಿಗೆ ಸಂಗ್ರಹ, ಹಿಡಿ ಅಕ್ಕಿ ಯೋಜನೆ, ಸಮಿತಿಯ ಮಾಹಿತಿ ಫಲಕ ಅಳವಡಿಸುವುದು, ಮಹಿಳಾ ಸಮಿತಿ ರಚನೆ ಮಾಡುವ ಕುರಿತು ಹಾಗೂ ಗ್ರಾಮದಲ್ಲಿನ ವಿವಿಧ ಸಂಘ-ಸಂಸ್ಥೆಗಳ ಸಭೆಗಳನ್ನು ನಡೆಸುವ ವಿಚಾರಗಳೂ ಚರ್ಚೆ. ವಿಶೇಷವಾಗಿ ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ನಿಗದಿತವಾಗಿ ಸೆಪ್ಟೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ
ಚರ್ಚೆ ನಡೆಯಲಿದೆ.

ಸಭೆಯ ಸಮಾಪನ ಕಾರ್ಯಕ್ರಮವು ಮಧ್ಯಾಹ್ನ 12:30ಕ್ಕೆ ನಡೆಯಲಿದ್ದು, ಬಳಿಕ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಮಸ್ತ ಭಕ್ತರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆಗಳನ್ನು ನೀಡುವ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ ಕಾರ್ಯಕಾರಿ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Related posts

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!