ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು ಎ.16ರಂದು ಆಯೋಜಿಸಿತು.
ಈ ಭೇಟಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಕಾರ್ಯವಿಧಾನ, ಕಾನೂನು ಪ್ರಕ್ರಿಯೆ ಹಾಗೂ ನ್ಯಾಯನಿರ್ವಹಣೆಯ ಬಗ್ಗೆ ನೇರ ಅನುಭವ ನೀಡುವುದು. ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನ್ಯಾಯಾಧೀಶರ ನ್ಯಾಯನಿರ್ವಹಣೆ, ವಕೀಲರ ವಾದ-ಪ್ರತಿವಾದ, ಪ್ರಕರಣಗಳ ವಿಚಾರಣೆ ಮುಂತಾದ ಪ್ರಕ್ರಿಯೆಗಳನ್ನು ಗಮನಿಸಿದರು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ತಿಳುವಳಿಕೆ ದೊರೆಯಿತು.
ಈ ಶೈಕ್ಷಣಿಕ ಭೇಟಿ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ, ಸಾಮಾಜಿಕ ಜವಾಬ್ದಾರಿ ಹಾಗೂ ನ್ಯಾಯದ ಮಹತ್ವದ ಬಗ್ಗೆ ಅರಿವು ಮೂಡಿಸಿತು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಾಯಕವಾಗಿವೆ.
ಈ ಶೈಕ್ಷಣಿಕ ಅಧ್ಯಯನದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.












