22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಏ.19ರ ಭಾನುವಾರದಂದು ಬೆಳಗ್ಗೆ 10:30ಕ್ಕೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. ಸಮಸ್ತ ಭಕ್ತರು ಹಾಗೂ ಹಿಂದೂ ಬಾಂಧವರು ಸಮಯಕ್ಕೆ ಮುಂಚಿತವಾಗಿ ಹಾಜರಾಗುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.

10:30ಕ್ಕೆ ದೇವರ ಸಾನಿಧ್ಯದಲ್ಲಿ ಭಕ್ತರ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಬಳಿಕ ಜಮಾ-ಖರ್ಚಿನ ವಿವರಗಳನ್ನು ಸಮಿತಿಯವರು ಮಂಡಿಸಲಿದ್ದು, ದೇವಸ್ಥಾನದ ಮುಂದಿನ ಕಾಮಗಾರಿಗಳ ಬಗ್ಗೆ ಮೇಸ್ತ್ರಿ ಮತ್ತು ಆಚಾರಿ ಇವರಿಂದ ಮಾಹಿತಿ ನೀಡಲಾಗುತ್ತದೆ. ಗ್ರಾಮದ ಎಲ್ಲಾ ಬೈಲುವಾರು ಸಮಿತಿಗಳ ಚರ್ಚೆ, ಪದಾಧಿಕಾರಿಗಳ ಆಯ್ಕೆ ಹಾಗೂ ಮೇ ತಿಂಗಳಲ್ಲಿ ಬೈಲುವಾರು ಸಭೆ ನಡೆಸುವ ಕುರಿತು. ಜೊತೆಗೆ ಒಂದು ದಿನದ ಶ್ರಮದಾನ ಕಾರ್ಯಕ್ರಮ, ವಂತಿಗೆ ಸಂಗ್ರಹ, ಹಿಡಿ ಅಕ್ಕಿ ಯೋಜನೆ, ಸಮಿತಿಯ ಮಾಹಿತಿ ಫಲಕ ಅಳವಡಿಸುವುದು, ಮಹಿಳಾ ಸಮಿತಿ ರಚನೆ ಮಾಡುವ ಕುರಿತು ಹಾಗೂ ಗ್ರಾಮದಲ್ಲಿನ ವಿವಿಧ ಸಂಘ-ಸಂಸ್ಥೆಗಳ ಸಭೆಗಳನ್ನು ನಡೆಸುವ ವಿಚಾರಗಳೂ ಚರ್ಚೆ. ವಿಶೇಷವಾಗಿ ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ನಿಗದಿತವಾಗಿ ಸೆಪ್ಟೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ
ಚರ್ಚೆ ನಡೆಯಲಿದೆ.

ಸಭೆಯ ಸಮಾಪನ ಕಾರ್ಯಕ್ರಮವು ಮಧ್ಯಾಹ್ನ 12:30ಕ್ಕೆ ನಡೆಯಲಿದ್ದು, ಬಳಿಕ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಮಸ್ತ ಭಕ್ತರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆಗಳನ್ನು ನೀಡುವ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ ಕಾರ್ಯಕಾರಿ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya
error: Content is protected !!