26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಏ.19ರ ಭಾನುವಾರದಂದು ಬೆಳಗ್ಗೆ 10:30ಕ್ಕೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. ಸಮಸ್ತ ಭಕ್ತರು ಹಾಗೂ ಹಿಂದೂ ಬಾಂಧವರು ಸಮಯಕ್ಕೆ ಮುಂಚಿತವಾಗಿ ಹಾಜರಾಗುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.

10:30ಕ್ಕೆ ದೇವರ ಸಾನಿಧ್ಯದಲ್ಲಿ ಭಕ್ತರ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಬಳಿಕ ಜಮಾ-ಖರ್ಚಿನ ವಿವರಗಳನ್ನು ಸಮಿತಿಯವರು ಮಂಡಿಸಲಿದ್ದು, ದೇವಸ್ಥಾನದ ಮುಂದಿನ ಕಾಮಗಾರಿಗಳ ಬಗ್ಗೆ ಮೇಸ್ತ್ರಿ ಮತ್ತು ಆಚಾರಿ ಇವರಿಂದ ಮಾಹಿತಿ ನೀಡಲಾಗುತ್ತದೆ. ಗ್ರಾಮದ ಎಲ್ಲಾ ಬೈಲುವಾರು ಸಮಿತಿಗಳ ಚರ್ಚೆ, ಪದಾಧಿಕಾರಿಗಳ ಆಯ್ಕೆ ಹಾಗೂ ಮೇ ತಿಂಗಳಲ್ಲಿ ಬೈಲುವಾರು ಸಭೆ ನಡೆಸುವ ಕುರಿತು. ಜೊತೆಗೆ ಒಂದು ದಿನದ ಶ್ರಮದಾನ ಕಾರ್ಯಕ್ರಮ, ವಂತಿಗೆ ಸಂಗ್ರಹ, ಹಿಡಿ ಅಕ್ಕಿ ಯೋಜನೆ, ಸಮಿತಿಯ ಮಾಹಿತಿ ಫಲಕ ಅಳವಡಿಸುವುದು, ಮಹಿಳಾ ಸಮಿತಿ ರಚನೆ ಮಾಡುವ ಕುರಿತು ಹಾಗೂ ಗ್ರಾಮದಲ್ಲಿನ ವಿವಿಧ ಸಂಘ-ಸಂಸ್ಥೆಗಳ ಸಭೆಗಳನ್ನು ನಡೆಸುವ ವಿಚಾರಗಳೂ ಚರ್ಚೆ. ವಿಶೇಷವಾಗಿ ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ನಿಗದಿತವಾಗಿ ಸೆಪ್ಟೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ
ಚರ್ಚೆ ನಡೆಯಲಿದೆ.

ಸಭೆಯ ಸಮಾಪನ ಕಾರ್ಯಕ್ರಮವು ಮಧ್ಯಾಹ್ನ 12:30ಕ್ಕೆ ನಡೆಯಲಿದ್ದು, ಬಳಿಕ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಮಸ್ತ ಭಕ್ತರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆಗಳನ್ನು ನೀಡುವ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ ಕಾರ್ಯಕಾರಿ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!