24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಏ.19ರ ಭಾನುವಾರದಂದು ಬೆಳಗ್ಗೆ 10:30ಕ್ಕೆ ಕೊಕ್ಕಡದ ಶ್ರೀರಾಮ ಭಜನಾ ಮಂದಿರದಲ್ಲಿ ಆರಾಧಕರ ಸಭೆಯನ್ನು ಆಯೋಜಿಸಲಾಗಿದೆ. ಸಮಸ್ತ ಭಕ್ತರು ಹಾಗೂ ಹಿಂದೂ ಬಾಂಧವರು ಸಮಯಕ್ಕೆ ಮುಂಚಿತವಾಗಿ ಹಾಜರಾಗುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.

10:30ಕ್ಕೆ ದೇವರ ಸಾನಿಧ್ಯದಲ್ಲಿ ಭಕ್ತರ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಬಳಿಕ ಜಮಾ-ಖರ್ಚಿನ ವಿವರಗಳನ್ನು ಸಮಿತಿಯವರು ಮಂಡಿಸಲಿದ್ದು, ದೇವಸ್ಥಾನದ ಮುಂದಿನ ಕಾಮಗಾರಿಗಳ ಬಗ್ಗೆ ಮೇಸ್ತ್ರಿ ಮತ್ತು ಆಚಾರಿ ಇವರಿಂದ ಮಾಹಿತಿ ನೀಡಲಾಗುತ್ತದೆ. ಗ್ರಾಮದ ಎಲ್ಲಾ ಬೈಲುವಾರು ಸಮಿತಿಗಳ ಚರ್ಚೆ, ಪದಾಧಿಕಾರಿಗಳ ಆಯ್ಕೆ ಹಾಗೂ ಮೇ ತಿಂಗಳಲ್ಲಿ ಬೈಲುವಾರು ಸಭೆ ನಡೆಸುವ ಕುರಿತು. ಜೊತೆಗೆ ಒಂದು ದಿನದ ಶ್ರಮದಾನ ಕಾರ್ಯಕ್ರಮ, ವಂತಿಗೆ ಸಂಗ್ರಹ, ಹಿಡಿ ಅಕ್ಕಿ ಯೋಜನೆ, ಸಮಿತಿಯ ಮಾಹಿತಿ ಫಲಕ ಅಳವಡಿಸುವುದು, ಮಹಿಳಾ ಸಮಿತಿ ರಚನೆ ಮಾಡುವ ಕುರಿತು ಹಾಗೂ ಗ್ರಾಮದಲ್ಲಿನ ವಿವಿಧ ಸಂಘ-ಸಂಸ್ಥೆಗಳ ಸಭೆಗಳನ್ನು ನಡೆಸುವ ವಿಚಾರಗಳೂ ಚರ್ಚೆ. ವಿಶೇಷವಾಗಿ ದೇವಸ್ಥಾನದ ಗರ್ಭಗುಡಿಯ ಕಾಮಗಾರಿ ನಿಗದಿತವಾಗಿ ಸೆಪ್ಟೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ
ಚರ್ಚೆ ನಡೆಯಲಿದೆ.

ಸಭೆಯ ಸಮಾಪನ ಕಾರ್ಯಕ್ರಮವು ಮಧ್ಯಾಹ್ನ 12:30ಕ್ಕೆ ನಡೆಯಲಿದ್ದು, ಬಳಿಕ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಮಸ್ತ ಭಕ್ತರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಿ, ಸೂಕ್ತ ಸಲಹೆಗಳನ್ನು ನೀಡುವ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ ಕಾರ್ಯಕಾರಿ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಪದಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya
error: Content is protected !!