25.5 C
ಪುತ್ತೂರು, ಬೆಳ್ತಂಗಡಿ
September 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

ಬೆಳ್ತಂಗಡಿ: ಉಜಿರೆ ರಥಬೀದಿಯಲ್ಲಿ 8/3/2009 ರಂದು ಅಂದಾಜು 50,000/- ರೂ ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. ಕಾಯ್ದೆಯಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನಿಗೆ, ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಧೀಶರಾದ ಬಸವರಾಜ್ ರವರು ದಿನಾಂಕ 10/04/2026 ರಂದು ಟಿ.ಇ ಜೋಸೆಫ್ (42) ರವರನ್ನು ದೋಷಿ ಎಂದು ಪರಿಗಣಿಸಿ, ದಿನಾಂಕ 16/04/26 ರಂದು NDPS ಕಾಯ್ದೆಯ ಸೆಕ್ಷನ್ 8(c) r/w ಸೆಕ್ಷನ್ 20(b)(ii)(B) ಅಡಿಯಲ್ಲಿ 5 ವರ್ಷಗಳ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 50,000/- ದಂಡವನ್ನು. ದಂಡವನ್ನು ಪಾವತಿಸಲು ವಿಫಲವಾದರೆ, ಅವರು 2 ತಿಂಗಳುಗಳ ಕಾಲ ಕಠಿಣ ಜೈಲು ಶಿಕ್ಷೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆ ವಿಧಿಸಿರುತ್ತದೆ. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ ಸುಬ್ಬಾಪುರ್ ಮಠ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸರ್ಕಾರಿ ಅಭಿಯೋಜಕರಾಧ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.

Related posts

ಒಲಂಪಿಯಾಡ್ ಪರೀಕ್ಷೆ ಪ್ರಥಮ ರ‍್ಯಾಂಕ್ ಬಂದ ವಿದ್ಯಾರ್ಥಿಗೆ ಸ್ಕಾಲರ್ಶಿಪ್

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ: ಬಿಜೆಪಿ ಶಾಸಕರುಗಳಿಂದ ವಿಧಾನ ಸೌಧದ ಎದುರು ಭಿತ್ತಿಪತ್ರ ಪ್ರದರ್ಶನ: “ದಕ್ಷಿಣ ಕನ್ನಡ ತೆರಿಗೆ ಮುಸ್ಲಿಮರ ಮನೆಗೆ” ಗಮನ ಸೆಳೆದ ಶಾಸಕ ಹರೀಶ್ ಪೂಂಜ ಪ್ರದರ್ಶಿಸಿದ ಬಿತ್ತಿಪತ್ರ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!