25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

ನೆರಿಯ: ಸೇವಾಭಾರತಿ, ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಏ.16ರಂದು ನೆರಿಯದ ಬಯಲು ಬಸದಿಯ ಹತ್ತಿರ ಶಿಲ್ಲಿಯವರ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಮುಂಡಾಜೆ ಪ್ರಾ.ಕೃ.ಪ.ಸ.ಸಂಘ(ನಿ.), ಅಧ್ಯಕ್ಷ ಪ್ರಕಾಶ್ ನಾರಾಯಣ ಮಾತನಾಡಿ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ಯಾಡಿ ಸೇವಾಭಾರತಿಯ ಖಜಾಂಚಿ ಎ. ಜೈರಾಜ್ ಸಾಲ್ಯಾನ್, ಟ್ರಸ್ಟಿ ಸ್ವರ್ಣಗೌರಿ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷೆ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರೆ ಸಜಿತಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಸಜಿತಾ ರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಗಿರಿಜಾ ಸ್ವಾಗತಿಸಿ, ಸೇವಾಭಾರತಿ ಡಾಕ್ಯುಮೆಂಟೇಶನ್ ಮೋನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋಆರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ರಜನಿ ಧನ್ಯವಾದವಿತ್ತರು.

Related posts

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!