September 6, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜು ಇದರ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ ತಂಡವು ಜಿಲ್ಲಾ ನ್ಯಾಯಾಲಯ ದಕ್ಷಿಣ ಕನ್ನಡ, ಮಂಗಳೂರು ಗೆ ಶೈಕ್ಷಣಿಕ ಭೇಟಿಯನ್ನು ಎ.16ರಂದು ಆಯೋಜಿಸಿತು.

ಈ ಭೇಟಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಕಾರ್ಯವಿಧಾನ, ಕಾನೂನು ಪ್ರಕ್ರಿಯೆ ಹಾಗೂ ನ್ಯಾಯನಿರ್ವಹಣೆಯ ಬಗ್ಗೆ ನೇರ ಅನುಭವ ನೀಡುವುದು. ಭೇಟಿಯ ಸಮಯದಲ್ಲಿ ವಿದ್ಯಾರ್ಥಿಗಳು ನ್ಯಾಯಾಲಯದ ವಿವಿಧ ವಿಭಾಗಗಳನ್ನು ವೀಕ್ಷಿಸಿದರು. ನ್ಯಾಯಾಧೀಶರ ನ್ಯಾಯನಿರ್ವಹಣೆ, ವಕೀಲರ ವಾದ-ಪ್ರತಿವಾದ, ಪ್ರಕರಣಗಳ ವಿಚಾರಣೆ ಮುಂತಾದ ಪ್ರಕ್ರಿಯೆಗಳನ್ನು ಗಮನಿಸಿದರು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಉತ್ತಮ ತಿಳುವಳಿಕೆ ದೊರೆಯಿತು.

ಈ ಶೈಕ್ಷಣಿಕ ಭೇಟಿ ವಿದ್ಯಾರ್ಥಿಗಳಲ್ಲಿ ಕಾನೂನು ಜ್ಞಾನ, ಸಾಮಾಜಿಕ ಜವಾಬ್ದಾರಿ ಹಾಗೂ ನ್ಯಾಯದ ಮಹತ್ವದ ಬಗ್ಗೆ ಅರಿವು ಮೂಡಿಸಿತು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸಲು ಸಹಾಯಕವಾಗಿವೆ.
ಈ ಶೈಕ್ಷಣಿಕ ಅಧ್ಯಯನದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಹಾಗೂ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya
error: Content is protected !!