40.8 C
ಪುತ್ತೂರು, ಬೆಳ್ತಂಗಡಿ
April 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

ಬೆಳ್ತಂಗಡಿ: ಉಜಿರೆ ರಥಬೀದಿಯಲ್ಲಿ 8/3/2009 ರಂದು ಅಂದಾಜು 50,000/- ರೂ ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09, ಕಲಂ: 8(ಸಿ) ಜೊತೆಗೆ 20(ಬಿ) ಎನ್.ಡಿ.ಪಿ.ಎಸ್. ಕಾಯ್ದೆಯಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ (42) ಎಂಬಾತನಿಗೆ, ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಧೀಶರಾದ ಬಸವರಾಜ್ ರವರು ದಿನಾಂಕ 10/04/2026 ರಂದು ಟಿ.ಇ ಜೋಸೆಫ್ (42) ರವರನ್ನು ದೋಷಿ ಎಂದು ಪರಿಗಣಿಸಿ, ದಿನಾಂಕ 16/04/26 ರಂದು NDPS ಕಾಯ್ದೆಯ ಸೆಕ್ಷನ್ 8(c) r/w ಸೆಕ್ಷನ್ 20(b)(ii)(B) ಅಡಿಯಲ್ಲಿ 5 ವರ್ಷಗಳ ಅವಧಿಗೆ ಕಠಿಣ ಜೈಲು ಶಿಕ್ಷೆ ಮತ್ತು ರೂ. 50,000/- ದಂಡವನ್ನು. ದಂಡವನ್ನು ಪಾವತಿಸಲು ವಿಫಲವಾದರೆ, ಅವರು 2 ತಿಂಗಳುಗಳ ಕಾಲ ಕಠಿಣ ಜೈಲು ಶಿಕ್ಷೆ. NDPS ಕಾಯ್ದೆಯ ಸೆಕ್ಷನ್ 32-B(f) ಅಡಿಯಲ್ಲಿ 1 ವರ್ಷದ ಅವಧಿಯ ಕಠಿಣ ಜೈಲು ಶಿಕ್ಷೆ ವಿಧಿಸಿರುತ್ತದೆ. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಬಿ.ಜಿ ಸುಬ್ಬಾಪುರ್ ಮಠ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದು, ಸರ್ಕಾರಿ ಅಭಿಯೋಜಕರಾಧ ಶ್ರೀಮತಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಸ್ತಾ ರವರು ಸಮರ್ಥವಾಗಿ ವಾದ ಮಂಡಿಸಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
error: Content is protected !!