September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

ನೆರಿಯ: ಸೇವಾಭಾರತಿ, ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಏ.16ರಂದು ನೆರಿಯದ ಬಯಲು ಬಸದಿಯ ಹತ್ತಿರ ಶಿಲ್ಲಿಯವರ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಮುಂಡಾಜೆ ಪ್ರಾ.ಕೃ.ಪ.ಸ.ಸಂಘ(ನಿ.), ಅಧ್ಯಕ್ಷ ಪ್ರಕಾಶ್ ನಾರಾಯಣ ಮಾತನಾಡಿ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ಯಾಡಿ ಸೇವಾಭಾರತಿಯ ಖಜಾಂಚಿ ಎ. ಜೈರಾಜ್ ಸಾಲ್ಯಾನ್, ಟ್ರಸ್ಟಿ ಸ್ವರ್ಣಗೌರಿ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷೆ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರೆ ಸಜಿತಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಸಜಿತಾ ರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಗಿರಿಜಾ ಸ್ವಾಗತಿಸಿ, ಸೇವಾಭಾರತಿ ಡಾಕ್ಯುಮೆಂಟೇಶನ್ ಮೋನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋಆರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ರಜನಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!