ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ ಎ.21-22ರವರೆಗೆ ನಡೆಯಲಿದೆ.
ಎ.21ರಂದು ಸಂಜೆ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ಎ.22ರಂದು ಬೆಳಿಗ್ಗೆ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ, ಗಣಪತಿ, ಚಾಮುಂಡೇಶ್ವರಿ ಪರಿವಾರ ದೈವಗಳಿಗೆ ಕಲಶಾರಾಧನೆ, ನಾಗತಂಬಿಲ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅರ್ಧ ಏಕಾಹ ಭಜನೆ, ರಂಗಪೂಜೆ ನಡೆಯಲಿದೆ.
ಎ.22ರಂದು ರಾತ್ರಿ ಪಿಂಗಾರ ಕಲಾವಿದೆರ್ ಬೆದ್ರ ಅಭಿನಯದ ಕಲಿಯುಗ ವರದ ಅಯ್ಯಪ್ಪ ಸ್ವಾಮಿಯ ಕಾರಣಿಕದ ಕಥೆ “ಓಂಕಾರ” ತುಳು ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳಾದ ಎಂ. ಆನಂದ ಗೌಡ ರವರು ತಿಳಿಸಿದ್ದಾರೆ.












