23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

ಬೆಳ್ತಂಗಡಿ: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ ಒಪಿ) ಬಿಡುಗಡೆಗೊಳಿಸಿದ್ದಾರೆ. ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರು, ಆನ್ ಲೈನ್‌ನಲ್ಲಿ ನೋಂದಣಿ ಕಡ್ಡಾಯ.

ಪ್ರತಿ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್ ಅಳವಡಿಸಲಾಗುವುದು. ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಫ್ಲಾಶ್ ಬಳಸಿ ಫೋಟೋ ತೆಗೆಯುವುದು, ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ್ ಬಳಸುವಂತಿಲ್ಲ. ಮುಂಗಡ ಟಿಕೆಟ್ ಕಾದಿರಿಸಲು ಅವಕಾಶ ಆಗುವಂತೆ ಎಲ್ಲ ಚಾರಣ ಪಥಗಳನ್ನೂ https://aranyavihaara.karnataka. gov.in/ ಅಂತರ್ಜಾಲ ತಾಣದಲ್ಲಿ ಸೇರಿಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!