25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಬಾರ್ಡ್ ಜಲಾನಯನ ಅಭಿವೃದ್ಧಿ ನಿಧಿ ಅಡಿಯಲ್ಲಿ ಪೆರ್ನೇಲೆ ಸ್ಪ್ರಿಂಗ್ ಶೆಡ್ ಯೋಜನೆಯ ಉದ್ಘಾಟನೆ ಹಾಗೂ ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ ಎ.18 ರಂದು ತೋಟತ್ತಾಡಿ ಗ್ರಾಮದ ಪೆರ್ನೇಲೆ ಕೆರೆ ಆವರಣದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಸ್ಪ್ರಿಂಗ್ ಶೆಡ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ ಈ ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಸಮೃದ್ಧಿಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟ ಅವರು ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಶಿಲಾನ್ಯಾಸ ನೇರವೇರಿಸಿದರು.

ತೋಟತ್ತಾಡಿ ಗ್ರಾಮದ 27.47ಎಕರೆ ಪ್ರದೇಶದಲ್ಲಿರುವ ಪೆರ್ನಾಳೆ ಕೆರೆ ೩೦೦ಕ್ಕೂ ಅಧಿಕ ಕುಟುಂಬಗಳ ಕೃಷಿಗೆ ಜೀವಾಳವಾಗಿದೆ. ಪುರಾತನ ಕಾಲದ ಈ ಕೆರೆ ಅಭಿವೃದ್ಧಿಗೊಳ್ಳುವುದರಿಂದ ಇನ್ನಷ್ಟು ಕುಟುಂಬಗಳಿಗೆ ಅನುಕೂಲವಾಗುವುದರ ಜತೆಗೆ ಹೆಚ್ಚಿನ ಸಮಯ ನೀರು ಹರಿದು ಬರಲಿದೆ. ಈ ಕೆರೆಯ ಅಭಿವೃದ್ಧಿಗೆ ಪಂಚಾಯಿತಿ ೩ ವರ್ಷಗಳ ಹಿಂದೆ ನಬಾರ್ಡ್ಗೆ ಮನವಿ ಸಲ್ಲಿಸಿತು. ನಬಾರ್ಡ್ ಅಧಿಕಾರಿಗಳ ತಂಡ ಇಲ್ಲಿಗೆ ಆಗಮಿಸಿ ಅಧ್ಯಯನ ನಡೆಸಿ ಕೆರೆ ಅಭಿವೃದ್ಧಿಯಿಂದ ೩೫೦ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂಬುದನ್ನು ಮನಗಂಡು ಈ ಯೋಜನೆ ಕೈಗೆತ್ತಿಕೊಂಡಿದೆ. ಗ್ರಾಮಸ್ಥರ ಸಭೆ ಕರೆದು ಸಮಿತಿ ರಚಿಸಿ ಊರಿನವರಿಂದಲೂ ಒಪ್ಪಿಗೆ ಪಡೆಯ ಲಾಗಿದೆ. ಈ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಕೆರೆ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರು ಶಾಸಕ ನಿಧಿಯಿಂದ 5 ಲಕ್ಷ ರೂ..ಅನುದಾನ ಒದಗಿಸಿದ ಶಾಸಕರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು. ಜಲಾನಯನ ಅಭಿವೃದ್ಧಿ ನಿಧಿಯಿಂದ 16 ಲಕ್ಷ ರೂ.ಅನುದಾನ ಒದಗಿಸಲಾಗಿದ್ದು ಅಭಿವೃದ್ಧಿ ಕಾಮಗಾರಿ ವೇಗ ಪಡೆಯಲಿದೆ. 90 ಲಕ್ಷ ರೂ. ವೆಚ್ಚದ ಯೋಜನೆ ಇದಾಗಿದೆ.

ಜಿಲ್ಲಾ ನಬಾರ್ಡ್ ಎಜಿಎಂ(ಡಿಡಿ) ಸಂಗೀತಾ ಎಸ್.ಕರ್ತಾ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಡಿ ಸಂಸ್ಥೆಯ ನಿರ್ದೇಶಕ ಶಾಜಿ, ಸಂಯೋಜಕ ನಾರಾಯಣ, ಪ್ರತಿನಿಧಿ ರಾಜೇಶ್, ಪೆನೇಲೆ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸಾದ್ ಕೆ.ವಿ., ನವೀನ್ ನೆರಿಯ, ತಾ.ಪಂ.ಮಾಜಿ ಸದಸ್ಯ ಕೊರಗಪ್ಪ ಗೌಡ, ಗ್ರಾ.ಪಂ.ಮಾಜಿ ಸದಸ್ಯ ಅವಿನಾಶ್ ಹಾಗೂ ಗುತ್ತಿಗೆದಾರ ಪ್ರಜೀತ್ ಉಪಸ್ಥಿತರಿದ್ದರು. ಒಬ್ಬಯ್ಯ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವಂದಿಸಿ, ನಿರೂಪಿಸಿದರು. ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!