September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

ಮಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಐತಿಹಾಸಿಕವಾದ ’ನಾರಿ ಶಕ್ತಿ ವಂದನ್‌ ಅಧಿನಿಯಮʼದ ಬಗ್ಗೆ ದಕ್ಷಿಣ ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ವಿವಿಧ ಕ್ಷೇತ್ರಗಳ ಮಹಿಳೆಯರೊಂದಿಗೆ ಮಂಗಳೂರಿನಲ್ಲಿ ನಾರಿ ಶಕ್ತಿ ವಂದನ್‌ ಸಮ್ಮೇಳನ ಆಯೋಜಿಸಿದ್ದು, ಈ ವೇಳೆ ಮಹಿಳೆಯರು ವ್ಯಕ್ತಪಡಿಸಿರುವ ಅಭೂತಪೂರ್ವ ಬೆಂಬಲ, ಸಂತಸ ಹಾಗೂ ಕೃತಜ್ಞತೆ ಮಾತುಗಳನ್ನು ಪ್ರಧಾನಮಂತ್ರಿ ಮೋದಿ ಅವರಿಗೆ ತಲುಪಿಸುವುದಾಗಿ ತಿಳಿಸಿದರು.

ದೇಶದಲ್ಲಿ ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶ-ಪ್ರಾತಿನಿಧ್ಯ ನೀಡುವ ಮೂಲಕ ಅವರ ಬದುಕಿನಲ್ಲಿ ಅಮೂಲಾಗ್ರ ಬದಲಾವಣೆಗೆ ಮುನ್ನುಡಿ ಬರೆಯಲಿರುವ ಈ ನಾರಿ ಶಕ್ತಿ ವಂದನ್‌ ಅಧಿನಿಯಮ ಜಾರಿ ಬಗ್ಗೆ ಮಹಿಳೆಯರಲ್ಲಿರುವ ಭಾವನೆ, ಅವರ ಅಭಿಪ್ರಾಯಗಳನ್ನು ತಿಳಿದುಕೊಳ್ಳುವುದು ಈ ಸಮ್ಮೇಳನದ ಪ್ರಮುಖ ಆಶಯವಾಗಿತ್ತು. ಅದರಂತೆ ಕ್ಯಾ. ಚೌಟ ಅವರು ಆಯೋಜಿಸಿದ್ದ ಸಮ್ಮೇಳನದಲ್ಲಿ ವೈದ್ಯರು, ಶಿಕ್ಷಕರು, ಉದ್ಯಮಿಗಳು, ಕ್ರೀಡಾಪಟುಗಳು, ಪತ್ರಕರ್ತೆಯರು ಮೀನುಗಾರಿಕೆ ಮತ್ತು ಕಾರ್ಮಿಕ ಸಮುದಾಯ ಸೇರಿದಂತೆ ವಿವಿಧ ವಲಯಗಳಲ್ಲಿ ಗುರುತಿಸಿಕೊಂಡಿರುವ ಮಹಿಳೆಯರು-ಯುವತಿಯರು ಹಾಗೂ ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ವಿವಿಧ ರಂಗದ ಮಹಿಳೆಯರು ಈ ಅಧಿನಿಯಮವನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಿದರು. ರಾಜಕೀಯ ಕ್ಷೇತ್ರದ ಮೂಲಕ ದೇಶ ಸೇವೆ ಮಾಡಲು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿರುವುದು ಪ್ರತಿಯೊಬ್ಬ ಹೆಣ್ಣು ಮಗಳಿಗೂ ಹೆಮ್ಮೆಯ ಸಂಗತಿಯಾಗಿದೆ. ದಶಕಗಳಿಂದ ಕೇವಲ ಚರ್ಚೆಯ ಹಂತದಲ್ಲಿದ್ದ ಈ ವಿಚಾರಕ್ಕೆ ಮರುಜೀವ ನೀಡಿ, ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಅಡಿಪಾಯ ಹಾಕಿದೆ. ಇಂತಹ ಶ್ರೇಷ್ಟ ಚಿಂತನೆಯುಳ್ಳ ಪ್ರಧಾನಿ ಮೋದಿಯವರಂತಹ ನಾಯಕತ್ವ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ. ಮಹಿಳಾ ಮೀಸಲಾತಿ ಜಾರಿ ಕುರಿತು ಈ ಹಿಂದೆ ಎದುರಾಗಿದ್ದ ಅಡೆತಡೆಗಳನ್ನು ನಿವಾರಿಸಿ, ಸರ್ಕಾರವು ಕೈಗೊಂಡಿರುವ ಈ ದಿಟ್ಟ ಹೆಜ್ಜೆಯು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತದ್ದು ಎಂದು ಮಹಿಳೆಯರು ಹರ್ಷ ವ್ಯಕ್ತಪಡಿಸಿದರು.

ಇದೇ ವೇಳೆ ಸಮ್ಮೇಳನದಲ್ಲಿ ತಮ್ಮ ಅಭಿಪ್ರಾಯಗಳನ್ನು ಪೋಸ್ಟ್ ಕಾರ್ಡ್ ಮೂಲಕ ನೇರವಾಗಿ ಪ್ರಧಾನಿಯವರೊಂದಿಗೆ ಹಂಚಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Related posts

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!