25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ : ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮಲ್ನಾಡ್ ಹೊಟೇಲ್ ನ ಕೆಲಸಗಾರ ಉತ್ತರ ಪ್ರದೇಶ ಮೂಲದ ಹರಿಶಂಕರ್(52) ಎಂಬಾತ ಏ.18 ರಂದು ಸಂಜೆ ಶೌಚಾಲಯಕ್ಕೆ ಹೋಗಿ ವಾಪಸ್ ಬಾರದೆ ಬಿದ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಕೆಲಸಗಾರ ಶೌಚಾಲಯಕ್ಕೆ ಹೋಗಿ ಎಷ್ಟೇ ಸಮಯವಾದರೂ ವಾಪಸ್ ಬಾರದೆ ಇದ್ದಾಗ ಕೆಲಸಗಾರರು ಕಿಟಕಿಯಿಂದ ಇಣುಕಿ ನೋಡಿದಾಗ ಮೃತಪಟ್ಟು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಹೊಟೇಲ್ ಮಾಲೀಕರು ಮಾಹಿತಿ ನೀಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.ಮಲ್ನಾಡ್ ಹೊಟೇಲ್ ಮಾಲೀಕರಾದ ಮಂಗಳೂರಿನ ಸತೀಶ್ ಎಂಬವರು ಕೆಲಸಗಾರನನ್ನು ಕೆಲಸಕ್ಕೆ ಸೇರಿಸುವ ವೇಳೆ ಸರಿಯಾದ ಯಾವುದೇ ದಾಖಲೆಗಳನ್ನು ಪಡೆಯದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ. ಮೃತಪಟ್ಟ ಕೆಲಸಗಾರನ ಹೆಸರು ಮತ್ತು ರಾಜ್ಯ ಮಾತ್ರ ತಿಳಿದಿದ್ದು ಯಾವ ವಿಳಾಸದವನು ಎಂದು ಈವರೆಗೆ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಮನೆಮಂದಿಯ ಪತ್ತೆಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya
error: Content is protected !!