July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

ಬೆಳ್ತಂಗಡಿ: ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಾರಣಿಗರ ಸುರಕ್ಷೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ ಒಪಿ) ಬಿಡುಗಡೆಗೊಳಿಸಿದ್ದಾರೆ. ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರು, ಆನ್ ಲೈನ್‌ನಲ್ಲಿ ನೋಂದಣಿ ಕಡ್ಡಾಯ.

ಪ್ರತಿ ಚಾರಣಿಗರ ಮೊಬೈಲ್‌ಗೆ ಚಾರಣಪಥದ ನಕ್ಷೆ ಸಹಿತ ಆ್ಯಪ್ ಅಳವಡಿಸಲಾಗುವುದು. ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಫ್ಲಾಶ್ ಬಳಸಿ ಫೋಟೋ ತೆಗೆಯುವುದು, ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ್ ಬಳಸುವಂತಿಲ್ಲ. ಮುಂಗಡ ಟಿಕೆಟ್ ಕಾದಿರಿಸಲು ಅವಕಾಶ ಆಗುವಂತೆ ಎಲ್ಲ ಚಾರಣ ಪಥಗಳನ್ನೂ https://aranyavihaara.karnataka. gov.in/ ಅಂತರ್ಜಾಲ ತಾಣದಲ್ಲಿ ಸೇರಿಸುವಂತೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Related posts

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya
error: Content is protected !!