22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

ಬೆಳ್ತಂಗಡಿ : ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮಲ್ನಾಡ್ ಹೊಟೇಲ್ ನ ಕೆಲಸಗಾರ ಉತ್ತರ ಪ್ರದೇಶ ಮೂಲದ ಹರಿಶಂಕರ್(52) ಎಂಬಾತ ಏ.18 ರಂದು ಸಂಜೆ ಶೌಚಾಲಯಕ್ಕೆ ಹೋಗಿ ವಾಪಸ್ ಬಾರದೆ ಬಿದ್ದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಕೆಲಸಗಾರ ಶೌಚಾಲಯಕ್ಕೆ ಹೋಗಿ ಎಷ್ಟೇ ಸಮಯವಾದರೂ ವಾಪಸ್ ಬಾರದೆ ಇದ್ದಾಗ ಕೆಲಸಗಾರರು ಕಿಟಕಿಯಿಂದ ಇಣುಕಿ ನೋಡಿದಾಗ ಮೃತಪಟ್ಟು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಹೊಟೇಲ್ ಮಾಲೀಕರು ಮಾಹಿತಿ ನೀಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.ಮಲ್ನಾಡ್ ಹೊಟೇಲ್ ಮಾಲೀಕರಾದ ಮಂಗಳೂರಿನ ಸತೀಶ್ ಎಂಬವರು ಕೆಲಸಗಾರನನ್ನು ಕೆಲಸಕ್ಕೆ ಸೇರಿಸುವ ವೇಳೆ ಸರಿಯಾದ ಯಾವುದೇ ದಾಖಲೆಗಳನ್ನು ಪಡೆಯದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ. ಮೃತಪಟ್ಟ ಕೆಲಸಗಾರನ ಹೆಸರು ಮತ್ತು ರಾಜ್ಯ ಮಾತ್ರ ತಿಳಿದಿದ್ದು ಯಾವ ವಿಳಾಸದವನು ಎಂದು ಈವರೆಗೆ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಮನೆಮಂದಿಯ ಪತ್ತೆಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya
error: Content is protected !!